Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವಜನತೆಗೆ ರಾಜಕೀಯ ತರಬೇತಿ: ಸ್ಪೀಕರ್ ಖಾದರ್
    ಇತ್ತೀಚಿನ ಸುದ್ದಿ

    ಯುವಜನತೆಗೆ ರಾಜಕೀಯ ತರಬೇತಿ: ಸ್ಪೀಕರ್ ಖಾದರ್

    June 30, 2023
    Share

    ಮಂಗಳೂರು: ಪದವೀಧರರಾಗಿ ರಾಜಕೀಯದಲ್ಲಿ ಆಸಕ್ತರಿರುವವರಿಗೆ ತರಬೇತಿ ನೀಡಲು ತರಬೇತಿ ಸಂಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

    ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಆಸಕ್ತ ಪದವೀಧರರಿಗೆ ತರಬೇತಿ ಪಡೆಯಲು ರಾಜ್ಯದಲ್ಲಿ ಪೊಲಿಟಿಕಲ್ ಸೆಂಟರ್‌ನ ಕೊರತೆಯಿದೆ. ಆದ್ದರಿಂದ ಈ ಕೊರತೆ ನೀಗಿಸಲು ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸುವ ಚಿಂತನೆಯಿದೆ. ಪದವೀಧರರಿಗೆ ಒಂದು ವರ್ಷದ ಕೋರ್ಸ್ ಇದಾಗಿದ್ದು, ಆರು ತಿಂಗಳು ಪ್ರ್ಯಾಕ್ಟಿಕಲ್ ತರಗತಿಯಿದ್ದರೆ, ಇನ್ನಾರು ತಿಂಗಳು ಇಂಟರ್ ಶಿಪ್ ಇರುತ್ತದೆ. ಅದಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಲು ಚರ್ಚೆ ನಡೆದಿದ್ದು, ಒಂದು ಹಂತಕ್ಕೆ ಬಂದಿದೆ. ಸರಕಾರದೊಂದಿಗೆ, ವಿಧಾನಸಭಾ ಸಭಾಧ್ಯಕ್ಷರೊಂದಿಗೆ ಮಾತನಾಡಿಕೊಂಡು ಈ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.ದೇಶದ ಪುಣೆಯಲ್ಲಿ ಇಂತಹ ರಾಜಕೀಯ ತರಬೇತಿ ನೀಡುವ ಸಂಸ್ಥೆಯೊಂದು ಇದೆ. ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಸಿಲೆಬಸ್‌ ಅನ್ನು ಮಾಡಲಾಗುತ್ತದೆ. ತರಬೇತಿ ಪಡೆದವರೆಲ್ಲಾ ರಾಜಕೀಯ ಪ್ರವೇಶಿಸಬೇಕು ಎಂದಲ್ಲ‌. ಅವರು ಎನ್‌ಜಿಒ ಕೂಡಾ ಆರಂಭಿಸಬಹುದು. ಸರಕಾರದ ಸಂಸ್ಥೆಗಳಲ್ಲೂ ಅವರಿಗೆ ಅವಕಾಶ ಇರಲಿದೆ. ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ ಎಂದು ಹೇಳಿದರು.

    Post Views: 228

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.