Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಾಹನ ಅಪಘಾತ ಪ್ರಕರಣ-ಮೃತ ವ್ಯಕ್ತಿಯ ಕುಟುಂಬಕ್ಕೆ 1.35 ಕೋ.ರೂ. ಪರಿಹಾರ ನೀಡಲು ಆದೇಶ
    ಇತ್ತೀಚಿನ ಸುದ್ದಿ

    ಮಂಗಳೂರು: ವಾಹನ ಅಪಘಾತ ಪ್ರಕರಣ-ಮೃತ ವ್ಯಕ್ತಿಯ ಕುಟುಂಬಕ್ಕೆ 1.35 ಕೋ.ರೂ. ಪರಿಹಾರ ನೀಡಲು ಆದೇಶ

    October 4, 2024
    Share

    ಮಂಗಳೂರು:ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.35 ಕೋಟಿ ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ವಿಮಾ ಕಂಪೆನಿಗೆ ಆದೇಶಿಸಿದ್ದಾರೆ. ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ನಗರದ ಕೊಟ್ಟಾರ ಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಹೇಶ್ ಭಟ್ ಮೃತಪಟ್ಟಿದ್ದರು. ಅದರಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯ‌ರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ಕಾಯ್ದೆಯಡಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಮಾ ಸಂಸ್ಥೆಯಾದ ಯುನಿವರ್ಸಲ್ ಸೊಂಪೋ ಜನರಲ್ ಇನ್ಸೂರೆನ್ಸ್ ಕಂಪೆನಿಯು 1.6 ಕೋಟಿ ರೂ. ಪರಿಹಾರವನ್ನು ಶೇ.6ರಷ್ಟು ಬಡ್ಡಿ ಸಹಿತ 1.35 ಕೋ.ರೂ.ಗಳ ಪರಿಹಾರವನ್ನು ಅರ್ಜಿದಾರರಿಗೆ ನೀಡಲು ಆದೇಶ ನೀಡಿದೆ. ಪರಿಹಾರ ಧನ ಪಡೆಯಲು ಮೃತರ ಪತ್ನಿ, ಅವರ ಪುತ್ರ ಹಾಗೂ ಮೃತರ ಹೆತ್ತವರು ಅರ್ಹರಾಗಿ ದ್ದಾರೆಂದು ನ್ಯಾಯಾಲಯವು ತಿಳಿಸಿದೆ. ಅರ್ಜಿದಾರರ ಪರವಾಗಿ ವಕೀಲರಾದ ಎ. ದಿನೇಶ್ ಭಂಡಾರಿ, ಕೆ.ಎಸ್.ಎನ್.ಅಡಿಗ, ಪ್ರೀತಿಕಾ ಕೆ.ಎಂ., ತೃಪ್ತಿ ವಾದಿಸಿದ್ದರು.

    Post Views: 182

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.