ಪುತ್ತೂರು: ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ವ್ಯಕ್ತಿಯೋರ್ವರಿಗೆ ಬೆದರಿಕೆಯೊಡ್ಡಿರುವ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ.
ಕಲ್ಲಾರೆ ರಾಘವೇಂದ್ರ ಮಠದ ಬಳಿಯ ನಿವಾಸಿ ಗುರುಪ್ರಸಾದ್ ನಾಯಕ್ ಎನ್(45ವ) ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಆ.19 ರಂದು ಸಂಜೆ ಆರೋಪಿಗಳಾದ ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ರೇಶ್ಮಾ ಮರಿಯಾ ರೆಬೆಲ್ಲೋ ಮತ್ತು ಅದೇ ಶಾಲೆಯ ಶಿಕ್ಷಕ ಪತಿ ಕ್ಲೆಮೆಂಟ್ ಪಿಂಟೊ ಎಂಬವರು ನಮ್ಮ ಮನೆಯ ಆವರಣದೊಳಗೆ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿನ್ನ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತೇವೆ, ನೀನು ದೂರನ್ನು ವಾಪಸ್ಸು ಪಡೆಯಬೇಕು ಎಂದು ಹೇಳಿ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.
ಶಿಕ್ಷಕಿ ರೇಷ್ಮಾ ಮೇರಿ ರೆಬೆಲ್ಲೋರವರು ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದು , ಇವರು ಕರ್ನಾಟಕ ಸರಕಾರದ ಸುಮಾರು ಎಂಟು ಲಕ್ಚಕ್ಕೂ ಅಧಿಕ ಮೊತ್ತವನ್ನು ವಂಚಿಸಿರುವ ಬಗ್ಗೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಕ್ರಮ, ಜೊತೆಗೆ ಅವರ ಸೇವಾ ವಿವರಗಳನ್ನು ಮಾಹಿತಿ ಹಕ್ಕುನಡಿಯಲ್ಲಿ ಕೋರಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 329(3), 352, 351(2), ಜೊತೆಗೆ 3(5) BNS 2023ಯಂತೆ ಪ್ರಕರಣ ಅ.ಕ್ರ 75(2025) ದಾಖಲಾಗಿರುತ್ತದೆ.



