ಮಂಗಳೂರು: ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ಟಿವಿ ವಿಕ್ರಮದ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಗ್ಡೆ ಅವರು ತಮ್ಮ “ಪೋಸ್ಟ್ ಕಾರ್ಡ್” ಎಂಬ ಫೇಸ್ಬುಕ್ ಖಾತೆಯಲ್ಲಿ, “ಮಾನ್ಯ ಮುಖ್ಯಮಂತ್ರಿಗಳೇ, ಗಣೇಶನ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಮಸೀದಿಗಳ ಮೇಲೆ ಒಮ್ಮೆ ಬುಲ್ಡೋಜರ್ ಕಳುಹಿಸುವ ಧೈರ್ಯವನ್ನು ನೀವು ಮಾಡಿದರೆ, ಮುಂದಿನ ವರ್ಷ ರಾಜ್ಯದಲ್ಲಿ ಇಂತಹ ಘಟನೆಗಳು ಎಲ್ಲಿಯೂ ಮರುಕಳಿಸುವುದಿಲ್ಲ” ಎಂದು ಹೇಳಿಕೆಯನ್ನು ಪ್ರಕಟಿಸಿದ್ದರು.ಇದಕ್ಕೆ ಸಂಬಂಧಿಸಿದಂತೆ, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 353(2)ರ ಅಡಿಯಲ್ಲಿ ಪ್ರಕರಣ (ಕ್ರೈಮ್ ನಂ. 143/2025) ದಾಖಲಾಗಿದೆ. ತನಿಖೆ ಕೈಗೊಂಡ ಮೂಡಬಿದರೆ ಪೊಲೀಸರು ಬೆಂಗಳೂರಿನಲ್ಲಿ ಅವರನ್ನು ಬಂಧಿಸಿ, ಸೆಪ್ಟೆಂಬರ್ 12ರಂದು ಮೂಡಬಿದರೆ ಸಿಜೆ ಮತ್ತು ಕೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಅವರನ್ನು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.




