Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ- ದಂಡ ಪಾವತಿ ಹೆಸರಿನಲ್ಲಿ ಹಲವರಿಗೆ ಸೈಬರ್‌ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ- ದಂಡ ಪಾವತಿ ಹೆಸರಿನಲ್ಲಿ ಹಲವರಿಗೆ ಸೈಬರ್‌ ವಂಚನೆ

    December 20, 2025
    Share

    ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳಿಗೆ ಸಂಬಂಧಿಸಿ ವಾಹನ ಮಾಲಕರು ಪರಿವಾಹನ್‌ ವೆಬ್‌ ಸೈಟ್‌ ಅಥವಾ ಕರ್ನಾಟಕ ವನ್‌ ಕೇಂದ್ರಗಳ ಮೂಲಕ ದಂಡ ಪಾವತಿ ಮಾಡಬಹುದು. ದಂಡ ಪಾವತಿಗೆ ಯಾವುದೇ ಆ್ಯಪ್‌ ಗಳು ಇಲ್ಲ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

    ಸೈಬರ್‌ ವಂಚಕರು ಸಕ್ರಿಯ:

    ಸರಕಾರ ದಂಡವನ್ನು ರಿಯಾಯತಿ ದರದಲ್ಲಿ ಪಾವತಿಸುವ ಯೋಜನೆ ಜಾರಿಗೊಳಿಸುತ್ತಿದ್ದಂತೆ ಕೆಲವು ಸೈಬರ್‌ವಂಚಕರು ಸಕ್ರಿಯರಾಗಿದ್ದು, ಲಿಂಕ್‌ ಗಳನ್ನು ಕಳುಹಿಸಿ ನಿಮ¬¾ ದಂಡವನ್ನು ಎಪಿಕೆ ಫೈಲ್‌ ಇನ್‌ ಸ್ಟಾಲ್‌ ಮಾಡಿ ಅದರ ಮೂಲಕ ಪಾವತಿಸಬಹುದು ಎಂದು ಕೆಲವರಿಗೆ ಲಿಂಕ್‌ ಕಳುಹಿಸಿದ್ದಾರೆ. ಆ್ಯಪ್‌ ಡೌನ್‌ ಲೋಡ್‌ ಮಾಡುತ್ತಿದ್ದಂತೆ ಮೊಬೈಲ್‌ ಹ್ಯಾಕ್‌ ಆಗುತ್ತದೆ. ಮೊಬೈಲ್‌ ನಲ್ಲಿರುವ ಎಲ್ಲ ಮಾಹಿತಿಗಳು ವಂಚಕರಿಗೆ ದೊರೆಯುವುದು ಮಾತ್ರವಲ್ಲದೆ, ಒಟಿಪಿ ಮೂಲಕ ಬ್ಯಾಂಕ್‌ ಖಾತೆಯಿಂದ ಹಣವನ್ನೂ ತಾವೇ ವರ್ಗಾವಣೆ ಮಾಡಿಕೊಂಡು ವಂಚಿಸುತ್ತಾರೆ. ನಗರದ ವ್ಯಾಪ್ತಿಯಲ್ಲಿ ಈಗಾಗಲೇ ಇಬ್ಬರು ಆ್ಯಪ್‌ ಡೌನ್‌ ಲೋಡ್‌ ಮಾಡಿ ಹಣ ಕಳೆದುಕೊಂಡಿದ್ದಾರೆ.

    ವಂಚಕರು ನಕಲಿ ವೆಬ್‌ಸೈಟ್‌ಗಳು ಮತ್ತು ನಕಲಿ ಪಾವತಿ ಲಿಂಕ್‌ಗಳನ್ನು ಎಸ್ಸೆಮ್ಮೆಸ್, ವಾಟ್ಸ್‌ ಆ್ಯಪ್‌, ಇ ಮೇಲ್‌, ಹಾಗೂ ಇತರ ಸಾಮಾಜಿಕ ಜಾಲತಾಣಗಳ ಮೂಲಕ ವಾಹನ ಮಾಲಕರಿಗೆ ಕಳುಹಿಸಿ, ಇ ಚಲನ್‌ ದಂಡ ಪಾವತಿಗೆ ಇದು ಸಹಾಯ ಮಾಡುತ್ತದೆ ಎಂದು ನಕಲಿ ಸಂದೇಶ ಕಳುಹಿಸುತ್ತಿದ್ದಾರೆ. ವಾಹನ ಸವಾರರು ಈ ಲಿಂಕ್‌ ಬಳಸಿದಲ್ಲಿ ವೈಯಕ್ತಿಕ ಮಾಹಿತಿ ಮತ್ತು ಬ್ಯಾಂಕ್‌ ಮಾಹಿತಿ ವಂಚಕರ ಪಾಲಾಗುತ್ತದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

    ಲಿಂಕ್‌ಗಳು ಬಂದಲ್ಲಿ ಮಂಗಳೂರು ನಗರ ಪೊಲೀಸ್‌ ಕಂಟ್ರೋಲ್‌ ರೂಂ. ವಾಟ್ಸ್‌ ಆ್ಯಪ್‌ ಸಂಖ್ಯೆ 9480802321ಗೆ ಕರೆ ಅಥವಾ ಸಂದೇಶದ ಮೂಲಕ ಮಾಹಿತಿ ನೀಡಬಹುದು. ರಾಷ್ಟ್ರೀಯ ಸೈಬರ್‌ ಸಹಾಯವಾಣಿ 1930ನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಏನು ಮಾಡಬಾರದು?:

    ಎಸ್ಸೆಮ್ಮೆಸ್‌, ವಾಟ್ಸ್‌ ಆ್ಯಪ್‌ ಮೊದಲಾದ ಸಾಮಾಜಿಕ ಜಾಲತಾಣಗಳಿಂದ ಬರುವ ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್‌ ಮಾಡಬಾರದು.
    ಒಟಿಪಿ, ಬ್ಯಾಂಕ್‌ ವಿವರ, ಪಾಸ್‌ವರ್ಡ್‌ ಇತ್ಯಾದಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು.
    ರಿಯಾಯಿತಿ ದರದಲ್ಲಿ ದಂಡ ಪಾವತಿ ಮಾಡುತ್ತೇವೆ ಎಂಬ ಯಾವುದೇ ಅನಧಿಕೃತ ಸಂದೇಶಗಳನ್ನು ನಂಬಬಾರದು.
    ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಿಗೆ ದಂಡ ಪಾವತಿಗೆ ಯಾವುದೇ ಆ್ಯಪ್‌ ಗಳನ್ನು ಪೊಲೀಸ್‌ ಇಲಾಖೆಯಾಗಲಿ ಸರಕಾರವಾಗಲೀ ಬಿಡುಗಡೆ ಮಾಡಿಲ್ಲ. ದಂಡ ಪಾವತಿ ಮಾಡಬೇಕಿದ್ದರೆ ಪರಿವಾಹನ್‌ ವೆಬ್‌ ಸೈಟ್‌, ಕರ್ನಾಟಕ ವನ್‌ ಸೆಂಟರ್‌ಅಥವಾ ಪೊಲೀಸ್‌ ಠಾಣೆಗಳಲ್ಲಿಯೂ ಪಾವತಿಸಬಹುದು. ಅನಧಿಕೃತವಾಗಿ ಬರುವ ಯಾವುದೇ ಲಿಂಕ್‌ ಗಳನ್ನು ಕ್ಲಿಕ್‌ ಮಾಡಬಾರದು. ಲಿಂಕ್‌ ಬಳಸಿದಲ್ಲಿ ವೈಯಕ್ತಿಕ ಮಾಹಿತಿ ಮತ್ತು ಬ್ಯಾಂಕ್‌ ಮಾಹಿತಿ ವಂಚಕರ ಪಾಲಾಗುತ್ತದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು – ಸುಧೀರ್‌ ಕುಮಾರ್‌ ರೆಡ್ಡಿ, ಮಂಗಳೂರು ನಗರ ಪೊಲೀಸ್‌ ಆಯುಕ್ತರು

    Post Views: 99

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.