Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಪ್ರಕರಣ: ಮೊದಲ ಬಾರಿಗೆ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣ: ಮೊದಲ ಬಾರಿಗೆ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ!

    July 19, 2023
    Share

    ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರು  ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿದ್ದಾರೆ.

    ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ, ಹಲವು ಸೇವೆ ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ ಕೆಲಸ ಅನ್ನೋದು ಎರಡು ರೀತಿಯ ಕತ್ತಿ ಇದ್ದ ಹಾಗೆ, ಅದು ಎರಡೂ ಕಡೆಯಿಂದ ಕೊಯ್ತದೆ, ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಕೂಡ ಉಂಟು ಮಾಡ್ತಾದೆ.

    ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗ ಇದೆ, ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ. ಇದಕ್ಕೆ ದ್ವೇಷ, ಅಸೂಯೆ ಕಾರಣ, ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ. ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ, ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ, ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಎಳೀತಾರೆ ಅಂತ ಗೊತ್ತಾಗ್ತಿಲ್ಲ.

    ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಕ್ಷೇತ್ರದ ವಿಚಾರ ಇದೆ. ನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ಶತೃತ್ವಕ್ಕೆ ಕಾರಣ ಏನು ಅನ್ನೋದೇ ನಮಗೆ ಇರೋ ಸಮಸ್ಯೆ. ಹಾಗಾಗಿ ನಮ್ಮ ಸಿಬ್ಬಂದಿಗಳಿಗೆ ಈ ಸತ್ಯ ಗೊತ್ತಿರಬಹುದು, ನಾವು ಯಾಕೆ ಸುಮ್ಮನಿದ್ದೇವೆ ಅಂತ ಅನಿಸಬಾರದು, ನಾವು ಸುಮ್ಮನಿರೋದು ಸಂಭಾಷಣೆ ಆರಂಭವಾಗಬಾರದು ಅಂತ.

    ಅನೇಕರು ಬಂದು ಕಣ್ಣೀರು ಹಾಕ್ತಾ ಇದಾರೆ, ನಿಮಗೆ ಹೀಗಾದರೆ ಹೇಗೆ ತಡೆಯೋದು ಅಂತ. ಆದರೆ ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಅಂತ ಗೊತ್ತಾಗ್ತಿದೆ. ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ.

    ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಿ. ಧರ್ಮಸ್ಥಳದ ಸಿಬ್ಬಂದಿ ಕಾರಣಕ್ಕೆ ಇಲ್ಲಿ ಎಲ್ಲವೂ ಚೆನ್ನಾಗಿದೆ. ನಮ್ಮ ಒಳ್ಳೆಯ ಕಾರ್ಯಕ್ರಮಗಳು‌ ನಡೆಯುತ್ತೆ, ಇದು ಮಧ್ಯದಲ್ಲಿ ಬಂದ ಮೋಡವಷ್ಟೇ, ಈ ಪರದೆ ತೆಗೀಬೇಕು, ಅದನ್ನ ದೇವರು ತೆಗೀತಾನೆ. ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ, ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ, ವೈಯಕ್ತಿತ ಅವಮಾನ ಮತ್ತು ವೈಯಕ್ತಿಕ ಸಂಭಾಷಣೆ ಸರಿಯಲ್ಲ, ನಿಲ್ಲಿಸಬೇಕು.

    ನಮ್ಮ ಅಭಿಮಾನಿಗಳು ರೆಡಿ ಇದ್ದಾರೆ, ಏನಾದ್ರೂ ಮಾಡಲಿಕ್ಕೆ, ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ, ನೈತಿಕ ಶಕ್ತಿ ದೊಡ್ಡದು ಅಂದಿದ್ದೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

    Post Views: 311

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.