Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಂದೂ ಧರ್ಮದ ಒಂದು ಸಮುದಾಯದಲ್ಲಿ 1ಲಕ್ಷ ಹೆಣ್ಣುಮಕ್ಕಳು ‘ವೇಶ್ಯೆ’ಯರಿದ್ದಾರೆ: ಅಧಿಕಾರಿ ವಿರುದ್ಧ ದೂರು ದಾಖಲು!
    ಇತ್ತೀಚಿನ ಸುದ್ದಿ

    ಹಿಂದೂ ಧರ್ಮದ ಒಂದು ಸಮುದಾಯದಲ್ಲಿ 1ಲಕ್ಷ ಹೆಣ್ಣುಮಕ್ಕಳು ‘ವೇಶ್ಯೆ’ಯರಿದ್ದಾರೆ: ಅಧಿಕಾರಿ ವಿರುದ್ಧ ದೂರು ದಾಖಲು!

    October 17, 2024
    Share

    ಮಂಗಳೂರು : ಹಿಂದೂ ಧರ್ಮದಲ್ಲಿ ಒಂದು ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ.

    ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅಶ್ಲೀಲವಾಗಿ ಮಾತನಾಡಿದ್ದಾರೆ.

    ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದ್ದು, ಸಂಜೀವ ಪೂಜಾರಿ ಕಾಣಿಯೂರು ಹೇಳಿರುವ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್​​ ಆಗಿದೆ. ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್​ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

    Post Views: 277

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.