ಲೋಕಸಭೆ ಚುನಾವಣೆ ಮತ ಎಣಿಕೆ ಜೂ.4ರಂದು ನಡೆಯಲಿದ್ದು ದಕ್ಷಿಣ ಕನ್ನಡದಲ್ಲಿಯೂ ಸಕಲ ತಯಾರಿ ನಡೆಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಇಂದು ಅವರು ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಜೂ.4ರಂದು ಬೆಳಗ್ಗೆ ಸ್ಟ್ರಾಂಗ್ ರೂಮ್ ತೆರೆಯುವುದರಿಂದ ಹಿಡಿದು EVM ಮಷಿನ್ ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲ ಹಂತಗಳನ್ನು ಪ್ರತಿನಿಧಿಗಳಿಗೆ ವಿವರಿಸಿದರು.
ಪ್ರತಿ ಪಕ್ಷಗಳು ತಮ್ಮ ಚುನಾವಣಾ ಏಜೆಂಟ್, ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಆಯೋಗ ನೀಡಿರುವ ಮಾರ್ಗಸೂಚಿ ಪಾಲಿಸುವುದಕ್ಕೆ ಸೂಚಿಸಿದರು.