Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಲತೇಶ್ ಗುಂಡ್ಯ ಸೇರಿದಂತೆ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್..!
    ಇತ್ತೀಚಿನ ಸುದ್ದಿ

    ಮಂಗಳೂರು : ಲತೇಶ್ ಗುಂಡ್ಯ ಸೇರಿದಂತೆ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್..!

    November 16, 2023
    Share

    ಮಂಗಳೂರು : ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಗೆ ಅವರಿಗೆ ಗಡಿಪಾರು ಮಾಡುವ ಕುರಿತಂತೆ ಕಾರಣ ಕೇಳಿ ಪೊಲೀಸ್ ಇಲಾಖೆ ನೋಟೀಸ್ ಜಾರಿ ಮಾಡಿದೆ. ಭಜರಂಗದಳದಲ್ಲಿ ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿರೋ ದಿನೇಶ್, ಪ್ರಜ್ವಲ್, ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿರೋ ಲತೇಶ್ ಗುಂಡ್ಯ ಹಾಗೂ ಭಜರಂಗದಳ ಕಾರ್ಯಕರ್ತರಾದ ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಗೆ ನೋಟೀಸ್ ನೀಡಲಾಗಿದೆ. ಎಲ್ಲರಿಗೂ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

    ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ಮೇಲೆ ಒಂದೊಂದು ಪ್ರಕರಣಗಳಿದ್ದು, ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿ ಆರೋಪ ಇದೆ. ಈ ಹಿನ್ನಲೆ ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಐವರ ಗಡೀಪಾರಿಗೆ ಮನವಿ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರಡಿ ಎಲ್ಲರಿಗೂ ಗಡೀಪಾರು ನೋಟೀಸ್ ನೀಡಲಾಗಿದೆ. ಅದರಲ್ಲಿ ಲತೇಶ್ ಗೆ ಬಳ್ಳಾರಿ ಜಿಲ್ಲೆ , ಪ್ರಜ್ವಲ್ ಗೆ ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಮನವಿ ಮಾಡಲಾಗಿದೆ.

    ನವೆಂಬರ್ 22 ರಂದು ಎಲ್ಲರಿಗೂ ವಿಚಾರಣೆಗೆ ಹಾಜರಾಗಲು ಮನವಿ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ ಬಾರಿಯೂ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರಿಗೆ ಆದೇಶ ನೀಡಲಾಗಿತ್ತು, ಆದರೆ ನ್ಯಾಯಾಲಯ ಮೆಟ್ಟಿಲೇರಿದ್ದ ಕಾರ್ಯಕರ್ತರು ಆದೇಶಕ್ಕೆ ತಡೆ ತಂದಿದ್ದರು. ಇದೀಗ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡೀಪಾರಿಗೆ ವರದಿ ತರಿಸಿಕೊಂಡು ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಮಾಡಲು ಸರಕಾರ ಅಸ್ತ್ರ ಪ್ರಯೋಗ ಮಾಡಿದೆ.

    Post Views: 277

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.