Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೆನ್ಲಾಕ್ ಆಸ್ಪತ್ರೆ ಮುಂಭಾಗ ಗುಳಿಗ ದೈವದ ಸಾನಿಧ್ಯ- ಸ್ವಂತ ಖರ್ಚಿನಲ್ಲಿ ಪ್ರತಿಷ್ಠೆ ಮಾಡಿದ ವೈದ್ಯಾಧಿಕಾರಿಗಳು, ಸಿಬ್ಬಂದಿ
    ಇತ್ತೀಚಿನ ಸುದ್ದಿ

    ವೆನ್ಲಾಕ್ ಆಸ್ಪತ್ರೆ ಮುಂಭಾಗ ಗುಳಿಗ ದೈವದ ಸಾನಿಧ್ಯ- ಸ್ವಂತ ಖರ್ಚಿನಲ್ಲಿ ಪ್ರತಿಷ್ಠೆ ಮಾಡಿದ ವೈದ್ಯಾಧಿಕಾರಿಗಳು, ಸಿಬ್ಬಂದಿ

    September 25, 2024
    Share

    ಮಂಗಳೂರು: ಇತ್ತೀಚೆಗೆ ನಗರದ ಹಂಪನಕಟ್ಟೆಯ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಾಮಗಾರಿ ಶರವು ಗುಳಿಗ ದೈವದ ಆಗ್ರಹಕ್ಕೆ ತುತ್ತಾಗಿ, ಗುತ್ತಿಗೆದಾರನೇ ದೈವಕ್ಕೆ ಶರಣಾಗಿದ್ದ ಸುದ್ದಿ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡಿತ್ತು.

    ಇದೀಗ ಅದೇ ಶರವು ಗುಳಿಗ ದೈವವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿಯೇ ಆರಾಧನೆಗೆ ಒಳಪಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಹಂಪನಕಟ್ಟೆಯ ವೆನ್ಲಾಕ್ ಜಿಲ್ಲಾಸ್ಪತ್ರೆ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಕಟ್ಟಡದ ಮುಂಭಾಗದ ಅಶ್ವತ್ಥಮರದ ಬುಡದಲ್ಲಿ ಗುಳಿಗನನ್ನು ಕಲ್ಲುಹಾಕಿ ಆರಾಧಿಸಲಾಗುತ್ತಿದೆ. ಸುಮಾರು 40ವರ್ಷಗಳ ಹಿಂದೆ ಈ ಜಾಗದಲ್ಲಿ ದಲಿತ ಕುಟುಂಬಗಳು ವಾಸವಾಗಿತ್ತು. ಅವರನ್ನು ಬಳಿಕ ವಾಮಂಜೂರಿಗೆ ಸ್ಥಳಾಂತರಿಸಲಾಗಿತ್ತು. ಆಗ ಅವರು ತಾವು ಆರಾಧಿಸಿಕೊಂಡಿದ್ದ 5ದೈವಗಳನ್ನು ತಮ್ಮೊಂದಿಗೆ ಕೊಂಡೊಯ್ದಿದ್ದರು. 4ದೈವಗಳು ಹೋದರೂ ಜಾಗದದೈವ ಗುಳಿಗ ಮಾತ್ರ ಹೋಗಿರಲಿಲ್ಲ. ಗುಳಿಗ ದೈವದ ಸಾನಿಧ್ಯ ಆಸ್ಪತ್ರೆಯ ಆವರಣದ ಅಶ್ವತ್ಥ ಮರದ ಬುಡದಲ್ಲಿತ್ತು. ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಳಿಗ ದೈವದ ಸಾನಿಧ್ಯವಿದ್ದ ಮರವನ್ನು ಅಲ್ಲಿಯೇ ಸ್ಥಳಾಂತರಿಸಲಾಗಿತ್ತು. ಕಾಮಗಾರಿ ಸಂದರ್ಭ ನಾಗಹತ್ಯೆಯೂ ಆಗಿತ್ತು. ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗೆ ಹಲವು ತೊಂದರೆಗಳು ಕಂಡುಬಂದಿತ್ತು. ಎರಡ್ಮೂರು ಅಸಹಜ ಸಾವು ಸಂಭವಿಸಿತ್ತು. ಸಿಬ್ಬಂದಿಗೆ ವಿಚಿತ್ರ ಅನುಭವಗಳಾಗಿತ್ತು‌. ಆದ್ದರಿಂದ ಪ್ರಶ್ನಾಚಿಂತನೆ ಇಟ್ಟಾಗ ದೈವಸಾನಿಧ್ಯ ಇರುವಿಕೆ ಗೋಚರವಾಗಿತ್ತು. ಅದರಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಅಧಿಕಾರಿಗಳು ಸ್ವಂತ ಖರ್ಚಿನಲ್ಲಿಯೇ ದೈವದ ಪುನರ್ ಪ್ರತಿಷ್ಠೆ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಧನಾತ್ಮಕ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

    Post Views: 337

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.