Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಿಸಿಬಿ ಕಾರ್ಯಾಚರಣೆ: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಿಸಿಬಿ ಕಾರ್ಯಾಚರಣೆ: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ

    September 29, 2023
    Share

    ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪರಿಸರದಲ್ಲಿ ಜಾನುವಾರು ಅಕ್ರಮ ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಫರಂಗಿಪೇಟೆ ಸಮೀಪದ ಅಮೆಮಾರ್‌ನ ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳಾಗಿದ್ದಾರೆ. ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ವಿಷಯದಲ್ಲಿ ಗಲಾಟೆ ನಡೆಯುತ್ತಿತ್ತು. ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಆರೋಪಿಗಳ ತಂಡ ಭಾಗಿಯಾಗಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಈ ವಿಚಾರವು ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಈ ನಡುವೆ ಮಂಗಳೂರು ನಗರದ ಅಡ್ಯಾರ್ ಪರಿಸರದಲ್ಲಿ ತಲವಾರುಗಳೊಂದಿಗೆ ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ಮಾರಕಾಯುಧಗಳಾದ ತಲವಾರುಗಳೊಂದಿಗೆ ಹೊಂಚು ಹಾಕುತ್ತಿದ್ದ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿ ಕೊಂಡಿರುವ ಅವರ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಶದಿಂದ ತಲವಾರುಗಳು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂಮಹೇಂದ್ರ ಪಿಕ್ ಅಪ್ ನ್ನು ವಶಪಡಿಸಿಕೊಂಡಿದ್ದು ಇವುಗಳ ಮೌಲ್ಯ ರೂ. 5,21,000 ಆಗಿದೆ.ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 224

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.