Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ
    ಇತ್ತೀಚಿನ ಸುದ್ದಿ

    ಕಾರ್ಕಳ: ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ

    December 16, 2025
    Share

    ಕಾರ್ಕಳ: ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮೆಷೀನ್‌ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ನ್ಯಾಯಾಲಯವು ವಾಹನದ ಮಾಲೀಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡ ವಿದಿಸಿದೆ.

    ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲದೆ, ಜಿಲ್ಲೆಯದ್ಯಂತ ಬೆಳಿಗ್ಗೆ ಹಾಗೂ ಸಾಯಂಕಾಲ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮೆಷಿನ್‌ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ ಬಗ್ಗೆ ಹಲವಾರು ಬಾರಿ ಖಡಕ್ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಕಾಂಟಾಕ್ಟ್‌ದಾರರು ಮತ್ತದೇ ಚಾಳಿಯನ್ನು ಮುಂದುವರಿಸುತಿದ್ದು, ವಾಹನದಲ್ಲಿ ಇಷ್ಟಬಂದಂತೆ ಕಾರ್ಮಿಕರನ್ನು ತುಂಬಿಸಿಕೊಂಡು, ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದಲ್ಲದೇ, ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಕಾರ್ಕಳ ನಗರ ಪೊಲೀಸರು ವಾಹನವನ್ನು ಬೆನ್ನಟ್ಟಿ ಕಾರ್ಕಳ ಪುರಸಭಾ ವ್ಯಾಪ್ತಿಯ ಶಿವತಿಕೆರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಕಾರ್ಕಳ ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

    ಕೆಲವು ವರ್ಷಗಳ ಹಿಂದೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರ್ಗಾನ ಗ್ರಾಮದ ಶಾಲಾ ಮುಂಭಾಗದ ತಿರುವಿನಲ್ಲಿ ವಾಹನದಲ್ಲಿದ್ದ ಸಿಮೆಂಟ್ ಕಾಂಕ್ರೀಟ್ ಮೆಷೀನ್ ಕಾರ್ಮಿಕರ ಮೇಲೆ ಮಗುಚಿ ಬಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಲ್ಲದೇ, ಹಲವಾರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಕೆಲವಾರು ದಿನ ಘಟನೆಯ ಗಂಭೀರತೆಯನ್ನು ಅರಿತು ಸ್ವಲ್ಪ ಮಟ್ಟಿನ ಸುಧಾರಣೆ ಕಂಡಿದ್ದರೂ, ಪುನಃ ಹಿಂದಿಂನಂತೆ ಕಾರ್ಮಿಕರನ್ನು ಕೊಂಡೋಯ್ಯುತಿದ್ದು, ಅಪಾಯವನ್ನು ಅರಿತಿದ್ದರೂ ಕ್ಯಾರೆ ಎನ್ನದ ಕಾರ್ಮಿಕರಿಗೆ ಹಾಗೂ ಕಾಂಟಾಕ್ಟ್‌ದಾರರಿಗೆ ನ್ಯಾಯಾಲಯದ ಮೂಲಕ ದಂಡ ಪಾವತಿಸುವಂತೆ ಮಾಡಿ ಎಚ್ಚರಿಕೆಯ ಕರೆಗಂಟೆ ನೀಡಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪೊಲೀಸರ ಬಗ್ಗೆ ಪ್ರಶಂಸೆಯ ಮಾತು ಕೇಳಿಬರುತ್ತಿದೆ.

    Post Views: 233

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.