Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಶ್ವಸಾಗರ ದಿನಾಚರಣೆ: ಕಡಲ ಬದಿಯಲ್ಲಿ ಕಸ ಹೆಕ್ಕಿದ ನಳಿನ್ ಕುಮಾರ್ ಕಟೀಲ್
    ಇತ್ತೀಚಿನ ಸುದ್ದಿ

    ವಿಶ್ವಸಾಗರ ದಿನಾಚರಣೆ: ಕಡಲ ಬದಿಯಲ್ಲಿ ಕಸ ಹೆಕ್ಕಿದ ನಳಿನ್ ಕುಮಾರ್ ಕಟೀಲ್

    September 18, 2022
    Share

    ಮಂಗಳೂರು: ವಿಶ್ವಸಾಗರ ದಿನಾಚರಣೆಯ ಅಂಗವಾಗಿ ಇಂದು ‘ಸ್ವಚ್ಛ ಕರಾವಳಿ ಸುರಕ್ಷಿತ ಸಾಗರ’ ಎಂಬ ಅಭಿಯಾನದಡಿ ಪಣಂಬೂರು ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು.

    ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದ.ಕ.ಜಿಲ್ಲಾಡಳಿತದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಕೋಸ್ಟ್ಗಾರ್ಡ್, ಎನ್ಸಿಸಿ, ಎನ್ ಎಸ್ ಎಸ್, ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯರ ಸಹಕಾರದಿಂದ ಕಡಲ ಸ್ವಚ್ಛತೆಯನ್ನು ಮಾಡಲಾಯಿತು.

    ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನ ಆರಂಭವಾಗಿದೆ. ಆದರೆ ಕಡಲ ತೀರದ ಸ್ವಚ್ಛತಾ ಅಭಿಯಾನ ಕಳೆದ ಹತ್ತಾರು ವರ್ಷಗಳಿಂದ ಇದ್ದರೂ, ಅದಕ್ಕೆ ಮಹತ್ವವನ್ನು ಕೊಡುವ ಕಾರ್ಯವನ್ನು ಪ್ರಧಾನಿಯವರು ಮಾಡಿದ್ದಾರೆ. ಇಂದು ಸ್ವಚ್ಛ ಸಾಗರ ಅಭಿಯಾನದಡಿಯಲ್ಲಿ ಕರಾವಳಿ ಪ್ರದೇಶದ ಸಮುದ್ರ ತೀರಗಳನ್ನು ಸ್ವಚ್ಛತೆ ಮಾಡುವ ಕಾರ್ಯವನ್ನು ಬಹಳ ಯಶಸ್ವಿಯಾಗಿ ಮಾಡಲಾಗಿದೆ ಎಂದು ಹೇಳಿದರು.

    ಈ ವೇಳೆ ಡಾ.ವೈ.ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಂಗಳೂರು ಮನಪಾ ಆಯುಕ್ತ ಡಾ.ಅಕ್ಷಯ್ ಶ್ರೀಧರ್ ಹಾಗೂ ಕೋಸ್ಟ್ ಗಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು. ಪಣಂಬೂರು ಬೀಚ್ ಅಲ್ಲದೆ ಸಸಿಹಿತ್ಲು ಬೀಚ್ ನಿಂದ ಮುಕ್ಕ, ಸುರತ್ಕಲ್ ಲೈಟ್ ಹೌಸ್, ದೊಡ್ಡಕೊಪ್ಪ, ಗುಡ್ಡೆಕೊಪ್ಲ, ಇಡ್ಯಾ, ಹೊಸಬೆಟ್ಟು, ಚಿತ್ರಾಪುರ, ಬೈಕಂಪಾಡಿ, ತಣ್ಣೀರು ಬಾವಿ, ಬೆಂಗ್ರೆ, ಉಳ್ಳಾಲ, ಸೋಮೇಶ್ವರ, ಕೋಟೆಕಾರ್, ತಲಪಾಡಿಯವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

    Post Views: 201

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.