Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ನ್ಯಾಯಾಲಯಕ್ಕೆ ಹಾಜರು
    ಇತ್ತೀಚಿನ ಸುದ್ದಿ

    ಮಂಗಳೂರು: ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ನ್ಯಾಯಾಲಯಕ್ಕೆ ಹಾಜರು

    July 25, 2025
    Share

    ಮಂಗಳೂರು: 2008ನೇ ಸಾಲಿನಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ ಎಂಬಾತನನ್ನು ಈ ದಿನ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈತನ ವಿರುದ್ಧದ ವಿಚಾರಣೆಯು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಬಾಕಿ ಇದ್ದು, ಈ ಮೂಲಕ ವಿಚಾರಣೆಯು ಪುನಾರಂಭವಾಗಿದೆ.

    ಪ್ರಕರಣದ ಹಿನ್ನೆಲೆ: 2008ರ ಅಕ್ಟೋಬರ್ 4ರಂದು, ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಪ್ರದೇಶಗಳಲ್ಲಿ ಭಯೋತ್ಪಾದನಾ ಕ್ರಿಯಾಕಲಾಪಗಳನ್ನು ನಿರ್ವಹಿಸುತ್ತಿದ್ದರು ಎಂಬ ಮಾಹಿತಿಯ ಮೇರೆಗೆ, ಡಿಸಿಐಬಿ (DCIB) ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದರು.ಸದ್ಯ ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ.ನಂ. 242/2008ರಂತೆ ದಾಖಲಾಗಿ, ಐಎಫ್ಎಕ್ಸ್ ಹಾಗೂ ಇತರ ಸ್ಪೋಟಕ ವಸ್ತುಗಳು ಸಹಿತ ಸಿಕ್ಕಿಬಿದ್ದ ಆರೋಪಿಗಳಲ್ಲಿ ಒಟ್ಟು 7 ಜನರನ್ನು ಬಂಧಿಸಲಾಗಿದ್ದು, ಉಳಿದ 6 ಆರೋಪಿಗಳು ತಲೆಮರೆಸಿಕೊಂಡಿದ್ದರು.ಈ ಪ್ರಕರಣದಲ್ಲಿ, ಆರೋಪಿಗಳಾದ: ಸಯ್ಯದ್ ಮೊಹಮ್ಮದ್ ನೌಶಾದ್, ಅಹಮ್ಮದ್ ಬಾವ ಅಬೂಬಕ್ಕರ್, ಫಕೀರ್ ಅಹಮ್ಮದ್ @ ಫಕೀರ್ ಈ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಮತ್ತು ಆರೋಪಿಗಳಾದ: ಮೊಹಮ್ಮದ್ ಆಲಿ, ಜಾವೇದ್ ಆಲಿ, ಮೊಹಮ್ಮದ್ ರಫೀಕ್, ಶಬ್ಬೀರ್ ಭಟ್ಕಳ್ ಇವರನ್ನು ಖುಲಾಸೆಗೊಳಿಸಿ ದಿನಾಂಕ 12-04-2017 ರಂದು ಅಂತಿಮ ತೀರ್ಪು ನೀಡಲಾಗಿತ್ತು.ಆದರೆ ಆರೋಪಿಗಳಲ್ಲಿ ಪ್ರಮುಖನಾದ ಯಾಸೀನ್ ಭಟ್ಕಳ ಪ್ರಕರಣದ ವಿಚಾರಣಾ ಹಂತದಲ್ಲಿ ತಲೆಮರೆಸಿಕೊಂಡಿದ್ದ ಕಾರಣ, ವಿಚಾರಣೆ ಬಾಕಿ ಉಳಿದಿತ್ತು.ಪ್ರಸ್ತುತ, ಯಾಸೀನ್ ಭಟ್ಕಳ ಹೈದರಾಬಾದ್ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದನು.

    ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ನೈಜ ಕ್ರಮಗಳನ್ನು ಕೈಗೊಂಡು ತಿಹಾರ್ ಜೈಲಿನ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಆರೋಪಿಯನ್ನು ದಿನಾಂಕ 24-07-2025 ರಂದು ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಾಜರುಪಡಿಸಿದ್ದಾರೆ. ಮುಂದಿನ ವಿಚಾರಣೆ ದಿನಾಂಕ: 20-08-2025 ರಂದು ನಿಗದಿಪಡಿಸಲಾಗಿದೆ.

    Post Views: 253

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.