Facebook Twitter Instagram
    Wednesday, June 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ : ಯೆಲ್ಲೊ ಅಲರ್ಟ್‌ ಘೋಷಣೆ
    ಇತ್ತೀಚಿನ ಸುದ್ದಿ

    ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ : ಯೆಲ್ಲೊ ಅಲರ್ಟ್‌ ಘೋಷಣೆ

    March 1, 2025
    Share

    ಮಂಗಳೂರು : ಕಾರವಾರ ಹಾಗೂ ಪಣಂಬೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿ ಗರಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹಾಗಾಗಿ ಹವಮಾನ ಇಲಾಖೆಯು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

    ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹಲವೆಡೆ ಒಣಹವೆ ಇದ್ದು, ಕರಾವಳಿಯಲ್ಲಿ ಉಷ್ಣ ಅಲೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ಕರಾವಳಿಯಲ್ಲಿ ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತ ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್​, ಬಾಗಲಕೋಟೆ, ಕಲಬುರಗಿಯಲ್ಲಿ 35-37 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರು, ಆಗುಂಬೆಯಲ್ಲಿ 35 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಮಡಿಕೇರಿಯಲ್ಲಿ ಕಳೆದ 24 ಗಂಟೆಗಳಲ್ಲಿ -2.8 ಡಿಗ್ರಿ ಸೆಲ್ಸಿಯಸ್​ನಷ್ಟು ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಕರಾಳಿಯಲ್ಲಿ ಕನಿಷ್ಠ ತಾಪಮಾನ 22-23 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ ಧಾರವಾಡದಲ್ಲಿ 19-22 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Post Views: 162

    Related Posts

    ಮಂಗಳೂರಿನಲ್ಲಿ ‘ಒಂದು ರಾಷ್ಟ್ರ, ಒಂದು ತುರ್ತು ಸಂಖ್ಯೆ – 112’ ಯಥಾರ್ಥಕ್ಕೆ

    June 11, 2025

    ಮಂಗಳೂರು ಹೆದ್ದಾರಿಗೆ ಪ್ಲಾಸ್ಟಿಕ್ ಸ್ಪರ್ಶ: ತ್ಯಾಜ್ಯದಿಂದ 50 ಕಿ.ಮೀ. ರಸ್ತೆ ನಿರ್ಮಾಣ

    June 11, 2025

    ಕುಡಿತದ ಚಟವೇ ಅಣ್ಣನಿಗೆ ಶಾಪವಾಯಿತು: ತಮ್ಮನಿಂದಲೇ ಹತ್ಯೆ, ಆರೋಪಿ ತಪ್ಪೊಪ್ಪಿಕೊಂಡ!

    June 10, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.