ಕೇರಳ : ಲಂಡನ್ ನಲ್ಲಿ ನರ್ಸಿಂಗ್ ಕೆಲಸಕ್ಕೆ ಹೊರಡಲು ತಯಾರಾಗಿದ್ದ ಯುವತಿಯೊಬ್ಬಳು ಧಾರುಣವಾಗಿ ಸಾವನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೃತ ಯುವತಿಯನ್ನು ಸೂರ್ಯ ಸುರೇಂದ್ರನ್ ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯವಾಗಿ ಮಲೆಯಾಳಂ ಭಾಷೆಯಲ್ಲಿ ಅರಳಿ ಹೂವು ಕನ್ನಡದಲ್ಲಿ ಕಣಗಿಲೆ ಎಂದು ಕರೆಯಲ್ಪಡುವ ಓಲಿಯಾಂಡರ್ ಪ್ಲವರ್ ನ್ನು ತಿಂದಿದ್ದು, ಇದರಿಂದಾಗಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.
![](https://policepatrikekarnataka.com/wp-content/uploads/2024/05/WhatsApp-Image-2024-05-09-at-5.04.27-PM.jpeg?v=1715254589)
ವೃತ್ತಿಯಲ್ಲಿ ನರ್ಸ ಆಗಿರುವ ಸೂರ್ಯ ಸುರೇಂದ್ರನ ಲಂಡನ್ ಗೆ ತೆರಳಳು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆತಂದರೂ ಆಕೆಯ ಜೀವ ಉಳಿಸಲಾಗಲಿಲ್ಲ. ಪ್ರಾಥಮಿಕ ಹಂತದಲ್ಲಿ ಆಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಯಲಾಗಿತ್ತು. ಆದರೆ ಆಕೆಗೆ ಚಿಕಿತ್ಸೆ ನೀಡುವ ಸಂದರ್ಭ ಆಸ್ಪತ್ರೆಯ ವೈದ್ಯರಿಗೆ ತಾನು ಪೋನ್ ನಲ್ಲಿ ಮಾತನಾಡುವ ವೇಳೆ ಅರಿವಿಲ್ಲದೆ ಅರಳಿ ಹೂ ಅನ್ನು ತಿಂದಿದ್ದೆನೆ ಎಂದಿದ್ದಾಳೆ. ಅಲ್ಲದೆ ವಿಮಾನ ನಿಲ್ದಾಣಕ್ಕೆ ಹೋಗುವ ವೇಳೆ ನನಗೆ ನಿರಂತರ ವಾಂತಿಯಾಗಿದೆ ಎಂದು ಮಾಹಿತಿ ನೀಡಿದ್ದಾಳೆ ಎಂದು ವರದಿಯಾಗಿದೆ.
ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಹಠಾತ್ ಸಾವಿನ ಕಾರಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹರಿಪಾಡ್ ಠಾಣಾಧಿಕಾರಿ ಕೆ.ಅಭಿಲಾಷ್ಕುಮಾರ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅರಳಿ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮನೆಯವರೊಂದಿಗೆ ಫೋನ್ನಲ್ಲಿ ಮಾತನಾಡುವಾಗ, ಅವಳು ಉದ್ದೇಶಪೂರ್ವಕವಾಗಿ ಅರಳಿ ಹೂವನ್ನು ಕಿತ್ತು ಸೇವಿಸಿದಳು ಎಂದು ಅವರು ಹೇಳಿದರು. “ತಕ್ಷಣ ಅವಳು ತಪ್ಪನ್ನು ಅರಿತು ಅದನ್ನು ಉಗುಳಿದಳು, ಆದರೆ ಎಲೆಯ ರಸದ ಕೆಲವು ಹನಿಗಳು ಒಳಗೆ ಹೋದವು” ಎಂದು ಅಧಿಕಾರಿ ಹೇಳಿದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ ಎಂದು ಬಹಿರಂಗಪಡಿಸಿದರು ಆದರೆ ಆಕೆಯ ಹೊಟ್ಟೆಯಲ್ಲಿ ಹೂವು ಅಥವಾ ಎಲೆಯ ಅವಶೇಷಗಳು ಕಂಡುಬಂದಿಲ್ಲ. ವಿವರವಾದ ಮರಣೋತ್ತರ ಪರೀಕ್ಷೆಯ ವರದಿಯನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ.. ಸುಂದರ ಕನಸುಗಳ ಬೆನ್ನತ್ತಿದ ಯುವತಿ ಅಕಾಲಿಕ ಸಾವು ಆಕೆಯ ಕುಟುಂಬಕ್ಕೆ ಆಘಾತ ತಂದಿದೆ.