Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳ : ಪೋನ್ ನಲ್ಲಿ ಮಾತನಾಡುತ್ತಾ ಕಣಗಿಲೆ ಹೂ ತಿಂದ ಯುವತಿ ಸಾವು
    ಇತ್ತೀಚಿನ ಸುದ್ದಿ

    ಕೇರಳ : ಪೋನ್ ನಲ್ಲಿ ಮಾತನಾಡುತ್ತಾ ಕಣಗಿಲೆ ಹೂ ತಿಂದ ಯುವತಿ ಸಾವು

    May 9, 2024
    Share

    ಕೇರಳ : ಲಂಡನ್ ನಲ್ಲಿ ನರ್ಸಿಂಗ್ ಕೆಲಸಕ್ಕೆ ಹೊರಡಲು ತಯಾರಾಗಿದ್ದ ಯುವತಿಯೊಬ್ಬಳು ಧಾರುಣವಾಗಿ ಸಾವನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.

    ಮೃತ ಯುವತಿಯನ್ನು ಸೂರ್ಯ ಸುರೇಂದ್ರನ್ ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯವಾಗಿ ಮಲೆಯಾಳಂ ಭಾಷೆಯಲ್ಲಿ ಅರಳಿ ಹೂವು  ಕನ್ನಡದಲ್ಲಿ ಕಣಗಿಲೆ  ಎಂದು ಕರೆಯಲ್ಪಡುವ ಓಲಿಯಾಂಡರ್ ಪ್ಲವರ್ ನ್ನು ತಿಂದಿದ್ದು, ಇದರಿಂದಾಗಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

    ವೃತ್ತಿಯಲ್ಲಿ ನರ್ಸ ಆಗಿರುವ ಸೂರ್ಯ ಸುರೇಂದ್ರನ ಲಂಡನ್ ಗೆ ತೆರಳಳು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆತಂದರೂ ಆಕೆಯ ಜೀವ ಉಳಿಸಲಾಗಲಿಲ್ಲ. ಪ್ರಾಥಮಿಕ ಹಂತದಲ್ಲಿ ಆಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಯಲಾಗಿತ್ತು. ಆದರೆ ಆಕೆಗೆ ಚಿಕಿತ್ಸೆ ನೀಡುವ ಸಂದರ್ಭ ಆಸ್ಪತ್ರೆಯ ವೈದ್ಯರಿಗೆ ತಾನು ಪೋನ್ ನಲ್ಲಿ ಮಾತನಾಡುವ ವೇಳೆ ಅರಿವಿಲ್ಲದೆ ಅರಳಿ ಹೂ ಅನ್ನು ತಿಂದಿದ್ದೆನೆ ಎಂದಿದ್ದಾಳೆ. ಅಲ್ಲದೆ ವಿಮಾನ ನಿಲ್ದಾಣಕ್ಕೆ ಹೋಗುವ ವೇಳೆ ನನಗೆ ನಿರಂತರ ವಾಂತಿಯಾಗಿದೆ ಎಂದು ಮಾಹಿತಿ ನೀಡಿದ್ದಾಳೆ ಎಂದು ವರದಿಯಾಗಿದೆ.

    ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಹಠಾತ್ ಸಾವಿನ ಕಾರಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹರಿಪಾಡ್ ಠಾಣಾಧಿಕಾರಿ ಕೆ.ಅಭಿಲಾಷ್‌ಕುಮಾರ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅರಳಿ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮನೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುವಾಗ, ಅವಳು ಉದ್ದೇಶಪೂರ್ವಕವಾಗಿ ಅರಳಿ ಹೂವನ್ನು ಕಿತ್ತು ಸೇವಿಸಿದಳು ಎಂದು ಅವರು ಹೇಳಿದರು. “ತಕ್ಷಣ ಅವಳು ತಪ್ಪನ್ನು ಅರಿತು ಅದನ್ನು ಉಗುಳಿದಳು, ಆದರೆ ಎಲೆಯ ರಸದ ಕೆಲವು ಹನಿಗಳು ಒಳಗೆ ಹೋದವು” ಎಂದು ಅಧಿಕಾರಿ ಹೇಳಿದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ ಎಂದು ಬಹಿರಂಗಪಡಿಸಿದರು ಆದರೆ ಆಕೆಯ ಹೊಟ್ಟೆಯಲ್ಲಿ ಹೂವು ಅಥವಾ ಎಲೆಯ ಅವಶೇಷಗಳು ಕಂಡುಬಂದಿಲ್ಲ. ವಿವರವಾದ ಮರಣೋತ್ತರ ಪರೀಕ್ಷೆಯ ವರದಿಯನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ.. ಸುಂದರ ಕನಸುಗಳ ಬೆನ್ನತ್ತಿದ ಯುವತಿ ಅಕಾಲಿಕ ಸಾವು ಆಕೆಯ ಕುಟುಂಬಕ್ಕೆ ಆಘಾತ ತಂದಿದೆ.

    Post Views: 468

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.