Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ:ಯುವ ಕಾಂಗ್ರೆಸ್ ಮುಖಂಡನಿಗೆ ಹಲ್ಲೆಗೈದ ಪ್ರಕರಣ-ಐವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ:ಯುವ ಕಾಂಗ್ರೆಸ್ ಮುಖಂಡನಿಗೆ ಹಲ್ಲೆಗೈದ ಪ್ರಕರಣ-ಐವರು ಆರೋಪಿಗಳ ಬಂಧನ

    February 15, 2026
    Share

    ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್‌ಎಸ್ ಯು ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಎಂದು ಗುರುತಿಸಲಾಗಿದೆ.

    ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿ ದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಜ.30ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ ಶರತ್ ಕುಂದರ್(25) ತಮ್ಮ ಸ್ನೇಹಿತನ ಕಾರಿನಲ್ಲಿ ಮಣಿಪಾಲದ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಅಲ್ಲಿ ಅಕ್ಷತ್ ಪೈ, ಶಶಾಂಕ್ ಹಾಗೂ ಉಡುಪಿಯ ರಾಧಾಕೃಷ್ಣ ಜನರಲ್ ಸ್ಟೋರ್ ಮಾಲಕರ ಮಗನೊಂದಿಗೆ ಸಣ್ಣ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ.

    ನಂತರ ಶರತ್ ಕುಂದರ್ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಸಂಕ ಬಳಿ ತಲುಪುವ ಸಂದರ್ಭ ಅಕ್ಷತ್ ಪೈ ಕರೆ ಮಾಡಿ, ಹೋಟೆಲಿನ ಗಲಾಟೆ ವಿಚಾರವಾಗಿ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ನಿಲ್ಲುವಂತೆ ತಿಳಿಸಿದ್ದಾನೆ. ರಾತ್ರಿ ಸುಮಾರು 11.30ರ ವೇಳೆಗೆ ಪಿಪಿಸಿ ಕ್ರಾಸ್ ಸಮೀಪ ರಸ್ತೆಯ ಬದಿಯಲ್ಲಿ ಶರತ್ ಕುಂರ್ದ ತಮ್ಮ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್ ಹಾಗೂ ರೋಹಿತ್ ಜೊತೆ ಮಾತನಾಡುತ್ತ ನಿಂತಿದ್ದ ವೇಳೆ ಎರಡು ವಾಹನಗಳು ಏಕಾಏಕಿ ಬಂದು ನಿಂತಿವೆ.

    ವಾಹನಗಳಿಂದ ಇಳಿದ ಅಕ್ಷತ್ ಪೈ, ಶಶಾಂಕ್ ಸೇರಿದಂತೆ 6-7 ಮಂದಿ ಕೈಯಲ್ಲಿ ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚೈನ್ ಹಿಡಿದು ಶರತ್ ಕುಂರ್ದ ಮೇಲೆ ಹಲ್ಲೆ ನಡೆಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ.

    ಹಲ್ಲೆ ಬಳಿಕ ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Post Views: 219

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.