Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್‌ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್‌ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್

    March 6, 2025
    Share

     ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ

    ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್ ನನ್ನು ಬಂಧಿಸಲು ಪೊಲೀಸರು ಬಳ್ಳಾರಿಗೆ ತೆರಳಿದ್ದಾಗ ಈ ವೇಳೆ ಸಮೀರ್ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ ಮೇಲೆ ಆತನಿಗೆ ನೋಟಿಸ್ ನೀಡಿ ಪೊಲೀಸರು ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ.

    ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ, ನನಗೆ ಜೀವ ಬೆದರಿಕೆ ಬರುತ್ತಿರುವ ಹಿನ್ನೆಲೆ ಸೌಜನ್ಯ ಪ್ರಕರಣದ ಮತ್ತೋರ್ವ ಹೋರಾಟಗಾರ ಗಿರಿಶ್ ಮಟ್ಟನವರ್ ಅವರನ್ನು ಮನೆಗೆ ಬರುವಂತೆ ಹೇಳುವಂತೆ ಮನವಿ ಮಾಡಿಕೊಂಡೆ. ಗಿರೀಶ್ ಮಟ್ಟನವರ್ ಮನೆಗೆ ಬಂದ ಸಂದರ್ಧದಲ್ಲಿಯೇ ಪೊಲೀಸರು ನಮ್ಮ ಮನೆಗೆ ಬಂದರು ಎಂದು ಸಮೀರ್ ಹೇಳಿದ್ದಾರೆ.

    ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿರುವ ಗಿರೀಶ್ ಮಟ್ಟನವರ್, ಸಮೀರ್ ತಮ್ಮ ವಿಡಿಯೋದಲ್ಲಿ ಯಾರ ಹೆಸರನ್ನು ಬಳಸಿಲ್ಲ. ಇನ್ನು ದೇವಸ್ಥಾನದ ಕುರಿತು ಯಾವುದೇ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿಲ್ಲ. ಸುಪ್ರೀಂಕೋರ್ಟ್‌ಗೆ ಅವರೇ ಬರೆದುಕೊಟ್ಟಂತಹ ಹೇಳಿಕೆಯನ್ನು ಸಮೀರ್ ತಮ್ಮ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ. ಸೌಜನ್ಯಳನ್ನು ನಿಮ್ಮ ಮನೆ ಮಗಳು ಎಂದು ತಿಳಿದುಕೊಳ್ಳಿ ಎಂದು ಮನವಿ ಮಾಡಿಕೊ0ಡರು.

    ಹೀಗೆ ಸಮೀರ್ ವಿಡಿಯೊ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊಗಳ ಕೆಲ ತುಣುಕುಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಹೀಗೆ ವೈರಲ್ ಆದ ಬೆನ್ನಲ್ಲೇ ಸಮೀರ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಂಚಿಕೊಂಡಿದ್ದು, ತನಗೆ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಹೇಳಿಕೊಂಡಿದ್ದಾರೆ.

    ತಾವೇ ಮಾತನಾಡಿರುವ ವಿಡಿಯೊ ಹಂಚಿಕೊಂಡಿರುವ ಸಮೀರ್ ಮೊದಲಿಗೆ ‘ನ್ಯಾಯ ಕೇಳೋದ್ರಲ್ಲೂನೂ ಜಾತಿ – ಧರ್ಮ ಎಲ್ಲಿಂದ ಬಂತೋ ನನಗೆ ಗೊತ್ತಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ. ಅಲ್ಲದೇ ಮತ್ತೊಂದು ಸ್ಟೋರಿಯಲ್ಲಿ ‘ನನ್ನ ಮನೆ ಅಡ್ರೆಸ್ ಲೀಕ್ ಮಾಡಿರೋರಿಗೆ, ನನ್ನ ಫೋನ್ ನಂಬರ್ ಲೀಕ್ ಮಾಡಿರೋರಿಗೆ ನನ್ನ ಹುಡುಕೊಂಡು ಬಂದು ಹೊಡಿಯೋದು ಕಷ್ಟ ಆಗಲ್ಲ. ಹೀಗಾಗಿ ಕನ್ನಡ ಯುಟ್ಯೂಬ್ ಕಮ್ಯೂನಿಟಿಯಲ್ಲಿ ಕೈ ಮುಗಿದು ಕೇಳಿಕೊಳ್ತೀನಿ ಈ ವಿಷಯವಾಗಿ ನಿಮ್ಮ ದನಿ ಎತ್ತಿ’ ಎಂದು ಸಮೀರ್ ಹೇಳಿದ್ದಾರೆ.

    Post Views: 378

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.